ಉತ್ತಮ ಸಾರ್ವಜನಿಕ ಆಡಳಿತಕ್ಕಾಗಿ ಕಾನೂನು ಪಾಲನೆ ಮುಖ್ಯ - ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

Nov 20, 2023 - 17:53
 0  7

Google  News WhatsApp Telegram Facebook

ಉತ್ತಮ ಸಾರ್ವಜನಿಕ ಆಡಳಿತಕ್ಕಾಗಿ ಕಾನೂನು ಪಾಲನೆ ಮುಖ್ಯ - ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

Janaa Akrosha News Desk.

ಉತ್ತಮ ಸಾರ್ವಜನಿಕ ಆಡಳಿತಕ್ಕಾಗಿ ಕಾನೂನು ಪಾಲನೆ ಮುಖ್ಯ
- ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ



ಯಾದಗಿರಿ : ನವೆಂಬರ್.18  :ಉತ್ತಮ ಸಾರ್ವಜನಿಕ ಆಡಳಿತಕ್ಕಾಗಿ ಕಾನೂನುಗಳನ್ನು ಆರ್ಥೈಸಿಕೊಂಡು ಅನುಸರಿಸಿದರೆ ಉತ್ತಮ ಸಮಾಜಕ್ಕೆ ನೆರವಾಗಲಿದೆ ಎಂದು ರಾಜ್ಯ ಉಪ ಲೋಕಾಯುಕ್ತರು, ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಹೇಳಿದರು.


ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಲೋಕಾಯುಕ್ತ ಸಂಸ್ಥೆ,  ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ಅವಿನಾಭಾವ ಸಂಬಂಧ ವೃದ್ಧಿಸಲು ಶ್ರಮಿಸುತ್ತಿದೆ.ಸರ್ಕಾರದ ಧ್ಯೇಯೋದ್ದೇಶ ಈಡೇರಿಸಲು , ಉತ್ತಮ ಸಾರ್ವಜನಿಕ ಆಡಳಿತದ ದೆಸೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳು ನಿಷ್ಪಕ್ಷಪಾತ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.

ಭ್ರಷ್ಟಾಚಾರ ತಡೆಯಲು ಪ್ರತಿಯೊಬ್ಬರು ಪ್ರತಿನಿತ್ಯ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅಸಮಾನತೆ ಮತ್ತು ಭ್ರಷ್ಟಾಚಾರ ಹೋಗಲಾಡಿಸಲು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದ ಧ್ಯೇಯೋದ್ದೇಶಗಳ ಅನ್ವಯ ಅರ್ಹ ವ್ಯಕ್ತಿಗೆ ಕಾನೂನುಬದ್ಧವಾಗಿ ಮತ್ತು ಸಕಾಲಕ್ಕೆ  ಸವಲತ್ತು ದೊರೆಯುತ್ತಿದೆಯೇ ಎಂಬುವದರ ಬಗ್ಗೆ ಲೋಕಾಯುಕ್ತ ಸಂಸ್ಥೆಯು ನಿಗಾ ಇಡುವ ಜೊತೆಗೆ ಸೂಕ್ತ ಕ್ರಮ ಸಹ ಕೈಗೊಳ್ಳುತ್ತಿದೆ. ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ನೈಸರ್ಗಿಕ ಕಾನೂನು ತತ್ವಗಳ ಪಾಲನೆ ಅತಿಮುಖ್ಯವಾಗಿದ್ದು, ಅಧಿಕಾರಿಗಳು ಈ ದಿಸೆಯಲ್ಲಿ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.


ಸಾರ್ವಜನಿಕರ ವೈಯಕ್ತಿಕ ಮತ್ತು ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಪ್ರಕರಣ ಮುಂದುವರೆಸಿಕೊಂಡು ಹೋಗಲು ಅಸಹಕಾರ ತೋರುವ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸಲು, ಲಂಚದ ವಿಷಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲು, ಸುಳ್ಳು ದೂರುದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅವಕಾಶವಿದ್ದು, ಅಧಿಕಾರಿಗಳು ಜಾಗೃತಿಯಿಂದ ಕಾರ್ಯನಿರ್ವಹಿಸುವಂತೆ ಅವರು ತಿಳಿಸಿದರು.

ಉತ್ತಮ ಆಡಳಿತಕ್ಕಾಗಿ ಹಾಗೂ  ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ತಪ್ಪುಗಳನ್ನು  ಸರಿಪಡಿಸಿಕೊಂಡು ಹೋಗುವ ಚಿಂತನೆ ಮಾಡುವ ಕಾರ್ಯವನ್ನು ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾಡಬೇಕು. ಸರಿಯಾದ ದಾರಿ ಕಂಡುಕೊಳ್ಳಬೇಕು ಹಾಗೂ ಹೊಸ ಸಂಶೋಧನಾತ್ಮಕ ಮನೋಭಾವ ಅಳವಡಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಸುಗಮ ಆಡಳಿತಕ್ಕೆ ಸಹಕಾರಿಯಾಗಲಿದೆ. ಕಾರಣ ಪ್ರತಿಯೊಬ್ಬರು ಸದೃಢ ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣಕ್ಕೆ ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಕೊಡುಗೆ ನೀಡಬೇಕು ಎಂದು ಅವರು ತಿಳಿಸಿದರು.


ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಅಪರಾಧಿಕ ಪ್ರಕರಣಗಳಲ್ಲಿ ಯುವ ಜನಾಂಗ ಕಂಡು ಬರುತ್ತಿದ್ದು, ಇದನ್ನು ಸರಿಪಡಿಸುವ ಕಾರ್ಯ ದೇಶದ ಜನಸಂಖ್ಯೆಯಲ್ಲಿ ಶೇಕಡಾ 1 ರಷ್ಟು ಇರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾಡಬೇಕು. ನಾಗರಿಕರ ಗೌರವಯುತ ಜೀವನಕ್ಕಾಗಿ, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.


ಉಪಲೋಕಾಯುಕ್ತರು ಇದೇ ಸಂದರ್ಭದಲ್ಲಿ ಲೋಕಾಯುಕ್ತ ಕಾಯ್ದೆ, ಬಾಲ್ಯ ವಿವಾಹ ನಿರ್ಮೂಲನೆ ಕಾಯ್ದೆ,  ಪ್ರಸವಪೂರ್ವ  ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳ ಮತ್ತು ರಕ್ಷಣಾ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಉದಾಹರಣೆಗಳೊಂದಿಗೆ ಉತ್ತಮ ಆಡಳಿತದ  ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು. ಅದರಂತೆ ಅಧಿಕಾರಿಗಳೊಂದಿಗೆ ಸಂವಾದದ ಮೂಲಕ ಸಮಸ್ಯೆಗಳಿಗೆ ಪರಿಹಾರ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ, ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯದೀಶರಾಧ ಶ್ರೀ ಬಿ. ಜಯಂತಕುಮಾರ್ ಅವರು ಪ್ರತಿ ಕ್ಷಣ ಒಳ್ಳೆಯ ಕೆಲಸಗಳ ಮೂಲಕ ಹಾಗೂ ಇನ್ನೊಬ್ಬರ ಗೌರವಯುತ ಜೀವನಕ್ಕೆ ಅನುವು ಮಾಡಿಕೊಡುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಿಸಲು ಸಾಧ್ಯವಿದ್ದು, ಸಮಾಜದ ಪ್ರತಿಯೊಬ್ಬರು ಪರಸ್ಪರ ಸಹಬಾಳ್ವೆಯಿಂದ ಇರಬೇಕು. ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕತೆ ಮೈಗೂಡಿಸಿಕೊಂಡಲ್ಲಿ ದೇಶಕ್ಕೆ ಹೆಚ್ಚು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ   ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್ ಅವರು  ಸ್ವಾಗತಿಸಿದರು. ಪದವಿ ಕಾಲೇಜ್ ಪ್ರಾಂಶುಪಾಲ  ಸುಭಾಷ್ ಚಂದ್ರ ಕೌಲಗಿ ಕಾರ್ಯಕ್ರಮ  ನಿರೂಪಿಸಿದರು.

ಜಿಲ್ಲಾಧಿಕಾರಿ ಶ್ರೀಮತಿ ಸುಶೀಲಾ. ಬಿ,
ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ನಿಬಂಧಕರು ಶ್ರೀ ಶಶಿಕಾಂತ ಭಾವಿಕಟ್ಟಿ,   ಉಪ ನಿಬಂಧಕರು ಚನ್ನಕೇಶವ ರೆಡ್ಡಿ ಎಂ.ವಿ, ಮಾನ್ಯ ಉಪ ಲೋಕಾಯುಕ್ತರ ಆಪ್ತಕಾರ್ಯದರ್ಶಿ ಕಿರಣ ಪ್ರಲ್ಹಾದ್ ರಾವ್ ಮುತಾಲಿಕ್ ಪಾಟೀಲ್,  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಶ್ರೀ. ರವೀಂದ್ರ ಎಲ್. ಹೊನೋಲೆ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಇತರರು ಉಪಸ್ಥಿತರಿದ್ದರು.

Google  News WhatsApp Telegram Facebook
HTML smaller font

.

.