ದ್ವಿ ಚಕ್ರ ವಾಹನದಲ್ಲಿ ಅಕ್ರಮ ಅಬಕಾರಿ ದಾಳಿ
ಯಾದಗಿರಿ : ಏಪ್ರಿಲ್ 05, : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಘೋಷಿಸಿ ದಿನಾಂಕ:16-03-2024 ರಿಂದ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣೆ ಶಾಂತಿಯುತವಾಗಿ ನಿಷ್ಪಕ್ಷಪಾತವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಜಿಲ್ಲೆಯ ವ್ಯಾಪ್ತಿಯಲ್ಲಿ ನಕಲಿ ಮದ್ಯ, ಅಕ್ರಮ ಮದ್ಯ, ಕಲಬೆರಕೆ ಸೇಂದಿ, ಕಳ್ಳಭಟ್ಟಿ ಸಾರಾಯಿ ಹಾಗೂ ಇತರೆ ಅಬಕಾರಿ ಅಕ್ರಮ ಪದಾರ್ಥಗಳ ತಯಾರಿಕೆ ಸಾಗಾಣಿಕೆ ಸಂಗ್ರಹಣೆ ಹಾಗೂ ಮಾರಾಟಗಳಂತಹ ಅಕ್ರಮ ಚಟುವಟಿಕೆಗಳು ನಡೆಯದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ಕೈಗೊಂಡಿರುವ ಮಾಹಿತಿ ಸಲ್ಲಿಸಲಾಗಿದೆ ಎಂದು ಯಾದಗಿರಿ ಅಬಕಾರಿ ಉಪ ಆಯುಕ್ತೆ ಶಾರದಾ ಸಿ.ಕೋಲಕಾರ ಅವರು ತಿಳಿಸಿದ್ದಾರೆ.
ಪ್ರಕರಣ ಸಂ.04, 2024ರ ಏಪ್ರಿಲ್ 04 ರಂದು ಮಾನ್ಯ ಅಬಕಾರಿ ಜಂಟಿ ಆಯುಕ್ತರು ಕಲಬುರಗಿ ವಿಭಾಗ ಕಲಬುರಗಿ (ಜಾ&ತ) ರವರ ಹಾಗೂ ಮಾನ್ಯ ಅಬಕಾರಿ ಉಪ ಆಯುಕ್ತರು ಯಾದಗಿರಿ ರವರ ನಿರ್ದೇಶನದಂತೆ ಮತ್ತು ಮಾನ್ಯ ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ಶಹಾಪುರ ರವರ ಮಾರ್ಗದರ್ಶನದಂತೆ ಶ್ರೀ ವಿಜಯಕುಮಾರ ಹೀರೆಮಠ, ಅಬಕಾರಿ ನಿರೀಕ್ಷಕರು ಹಾಗೂ ಶ್ರೀ ಮಹೇಶ ಚೌಧರಿ ಅಬಕಾರಿ ಉಪ ನಿರೀಕ್ಷಕರು, ಶಹಾಪುರ ವಲಯ, ಅಬಕಾರಿ ಮುಖ್ಯ ಪೇದೆಯಾದ ಶ್ರೀ ಮಹ್ಮದ ಸುಭಾನಿ, ವಾಹನ ಚಾಲಕರಾದ ಶ್ರೀ ಗೋಪಾಲ ರೆಡ್ಡಿ ಮತ್ತು ಗೃಹ ರಕ್ಷಕ ಸಿಬ್ಬಂದಿಯಾದ ಸೂರ್ಯಕಾಂತ ಸಿಬ್ಬಂದಿಗಳೊAದಿಗೆ ಕೂಡಿಕೊಂಡು ಖಚಿತ ಬಾತ್ಮೀಯ ಮೇರೆಗೆ ವಡಗೇರಾ ತಾಲ್ಲೂಕಿನ ತಡಿಬಿಡಿ ಗ್ರಾಮದ ಹತ್ತಿರ ರಸ್ತೆಗಾವಲು ಮಾಡುತ್ತೀದ್ದಾಗ ಕೆಎ-33-ಇಡಿ-8972 ದ್ವೀ ಚಕ್ರ ವಾಹನದಲ್ಲಿ ಅಕ್ರಮವಾಗಿ 8.640ಲಿ ಮದ್ಯವನ್ನು ಮಾರಾಟದ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ಕಂಡುಬAದಿರುತ್ತದೆ, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.