ಕ್ರೀಡೆ

ದೈನಂದಿನ ಜೀವನದಲ್ಲಿ ಯೋಗವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು: ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ

WhatsApp Group Join Now
Telegram Group Join Now

ನಗರದ ಸ್ವಪ್ನ ಗ್ರೌಂಡ್ ನಲ್ಲಿ ನಡೆದ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಯಾದಗಿರಿ: ಜೂನ್, 21 ತಲೆತಲಾಂತರದಿಂದ ಬಂದಿರುವ ಯೋಗಭ್ಯಾಸವನ್ನು ನಿತ್ಯ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ದೇಹ ಮತ್ತು  ಮನಸ್ಸಿನ ಆರೋಗ್ಯ ಸುದೀರ್ಘ ಕಾಲದವರೆಗೆ ಕಾಪಾಡಿಕೊಳ್ಳಬಹುದು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಸಾರ್ವಜನಿಕ ಶಿಕ್ಷಣ ಇಲಾಖೆ,  ನಗರಸಭೆ,  ಪತಂಜಲಿ ಯೋಗ ಸಮಿತಿ ಹಾಗೂ ಸರ್ಕಾರದ ಇತರೆ ಇಲಾಖೆಗಳ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಆವರಣದಲ್ಲಿ ( ಸಪ್ನ ಗ್ರೌಂಡ್)   ನಡೆದ 10 ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಾದರಗಾರರ ಎದೆಯಲ್ಲಿ ಆಕಳಿಸಿದ ರಾಕ್ಷಸ!

ಸ್ವಯಂ ಮತ್ತು ಸಮಾಜದ ಒಳಿತಿಗೆ ಯೋಗ ಎಂಬುದು ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯವಾಗಿದೆ ಎಂದರು. ಯೋಗವು ಭಾರತದಲ್ಲಿ ಹುಟ್ಟಿಕೊಂಡ ಪ್ರಾಚೀನ ಅಭ್ಯಾಸವಾಗಿದೆ. ಅನೇಕ ಋಷಿ ಮುನಿಗಳು, ತಪಸ್ವಿಗಳು ಧಾರ್ಮಿಕ ಗುರುಗಳು ಯುಗ ಯುಗಾಂತರಗಳಿಂದ ಯೋಗಭ್ಯಾಸ ಮಾಡಿ ದೈಹಿಕ ಮತ್ತು ಮಾನಸಿಕವಾಗಿ ಪ್ರಯೋಜನ ಪಡೆದಿದ್ದಾರೆ ಎಂದು ಶಾಸಕರು ನುಡಿದರು.

https://www.facebook.com/share/v/kAG1oAshgBoWrM8X/?mibextid=oFDknk

ಗಮನಸೆಳೆದ ಯೋಗ ಪ್ರದರ್ಶನ
ಸೂರ್ಯ ಉದಯಿಸುವ ಮುನ್ನವೇ ಯೋಗಪಟುಗಳು ಮೈದಾನದಲ್ಲಿ ಸೇರಿದ್ದರು,  ಶಾಲಾ ಕಾಲೇಜು,  ವಿದ್ಯಾರ್ಥಿ,  ವಿದ್ಯಾರ್ಥಿನಿಯರು ಆಗಮಿಸಿ ಯೋಗ ದಿನಾಚರಣೆಗೆ ಮೆರಗು ತಂದರು.

ಪತಂಜಲಿಯ ಯೋಗ ಸಮಿತಿಯ ಸಂಚಾಲಕ ಅನಿಲ್ ಗುರೂಜಿ ಅವರು ಯೋಗಾಸನದ ವಿವಿಧ ಭಂಗಿಗಳನ್ನು ಜನಪ್ರತಿನಿಧಿಗಳು,  ಅಧಿಕಾರಿ,  ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ನಗರದ ನಾಗರಿಕರಿಗೆ ಯೋಗಭ್ಯಾಸ ಮಾಡಿಸಿದರು.

ಯೋಗಭ್ಯಾಸ ಅಂಗವಾಗಿ ವಿವಿಧ ಯೋಗ ಪ್ರದರ್ಶನಗಳಾದ ಮಕರಾಸನ,  ವೃಕ್ಷಾಸನ,  ಭುಜಂಗಾಸನ,  ವಜ್ರಾಸನ, ದಂಡಾಸನ ಸೇರಿದಂತೆ ವಿವಿಧ ಪ್ರಕಾರದ ಯೋಗ
ಯೋಗ ಪ್ರದರ್ಶನದಲ್ಲಿ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿದರು

http://ನಮ್ಮನ್ನು ಬೆಂಬಲಿಸಿ: https://www.facebook.com/laxmikantnayakkollur?mibextid=ZbWKwL

ಯೋಗ ದಿನಾಚರಣೆ ಅಂಗವಾಗಿ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಪ್ರಮಾಣಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ, ಜಿಲ್ಲಾ ಆಯುಷ್ ಅಧಿಕಾರಿ ಡಾ.ವಂದನಾ ಗಾಳಿ,  ಬ್ರಹ್ಮಕುಮಾರಿ ಮುಖ್ಯಸ್ಥೆ ಕು. ವೀಣಾ, ಡಾ.ಪ್ರಕಾಶ ರಾಜಾಪುರ, ಸಂಗಮೇಶ ಕೆಂಭಾವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸ್ಕೌಟ್ಸ್ ಗೈಡ್ಸ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Group Join Now
Telegram Group Join Now

Related Posts