ಸ್ಥಳೀಯ

ಪಂಚಭೂತಗಳಲ್ಲಿ ಲೀನವಾದ ಸುರಪುರದ ಜ್ಯೋತಿ

WhatsApp Group Join Now
Telegram Group Join Now

ಸುರಪುರ : ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಹೃದಯಾಘಾತದಿಂದ ಭಾನುವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಸುರಪುರಕ್ಕೆ ಇಂದು ಬೆಳಗಿನ ಜಾವ 5 ಗಂಟೆಗೆ ತರಲಾಯಿತು.

ಸುರಪುರ ಪಟ್ಟಣದಲ್ಲಿರುವ ವಸಂತ ನಗರದ ದರ್ಬಾರ್ ಹೌಸ್ ನಲ್ಲಿ ಬೆಳಗ್ಗೆ ರಾಜ ಮನೆತನದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಮಾಡಲಾಯಿತು. ಫೆಬ್ರವರಿ 1ರಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ರಾಜಾ ವೆಂಕಟಪ್ಪನ ಅಗಲಿಕೆಯಿಂದ ಸಹಸ್ರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬೆಳಗ್ಗೆ 11 ಗಂಟೆ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಾದಂತೆ ಪ್ರಭು ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಅಂತಿಮ ದರ್ಶನ ಪಡೆಯಲು 30 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು, ಯುವಕರು ಸೇರಿದ್ದರಿಂದ ನೂಕುನುಗ್ಗಲು ಉಂಟಾಯಿತು. ಪೋಲಿಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಶರಣಬಸಪ್ಪ ದರ್ಶನಾಪೂರ, ಪ್ರಿಯಾಂಕ್ ಖರ್ಗೆ, ನಾಗೇಂದ್ರ ಸೇರಿದಂತೆ ಹಲವು ಸಚಿವರು, ಶಾಸಕರು ಪಕ್ಷಾತೀತವಾಗಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜಾ ವೆಂಕಟಪ್ಪ ನಾಯಕ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪ್ಯಾಪ್ಲಿ ರಾಜ ಮನೆತನದ ಪ್ರಕಾರ ಯಾದಗಿರಿ ನಗರದ ಹಾಲಬಾವಿ ಹತ್ತಿರ ಇರುವ ಪ್ಯಾಪ್ಲಿ ರಾಜಮನೆತನದ ರುದ್ರ ಭೂಮಿಯಲ್ಲಿ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯ ಸಂಸ್ಕಾರ ಮಾಡಲಾಯಿತು. ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಂದಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕರನ್ನು ನೆನೆದು ಕಣ್ಣೀರ ಕೋಡಿ ಹರಿಸಿದರು.

WhatsApp Group Join Now
Telegram Group Join Now

Related Posts